News Karnataka Kannada
Wednesday, May 01 2024
ದೆಹಲಿ

ಜಿಎಸ್‌ಟಿ ಬಾಕಿ ಪರಿಹಾರ ಬಿಡುಗಡೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಘೋಷಣೆ

Entire Rs 16,982 cr GST compensation cess to states to be cleared: FM
Photo Credit : IANS

ನವದೆಹಲಿ: ರಾಜ್ಯಗಳಿಗೆ 16,982 ಕೋಟಿ ರೂಪಾಯಿಗಳ ಸಂಪೂರ್ಣ ಜಿಎಸ್‌ಟಿ ಬಾಕಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನ 49ನೇ ಸಭೆ ಮುಗಿದ ಬೆನ್ನಲ್ಲೇ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಅಕೌಂಟೆಂಟ್ ಜನರಲ್ (ಎಜಿ) ಪ್ರಮಾಣಪತ್ರವನ್ನು ಸಲ್ಲಿಸಿದ ಆರು ರಾಜ್ಯಗಳಿಗೆ 16,524 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ದೆಹಲಿ, ತಮಿಳುನಾಡು ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳು ಎಜಿ ಪ್ರಮಾಣಪತ್ರ ಸಲ್ಲಿಸಿವೆ.

ಜಿಎಸ್‌ಟಿ ಪರಿಹಾರವನ್ನು ಪಡೆಯಲು ರಾಜ್ಯಗಳಿಗೆ ಎಜಿ ಪ್ರಮಾಣಪತ್ರವನ್ನು ಸಲ್ಲಿಸುವುದು ಅಗತ್ಯವಾಗಿದ್ದರೂ, ಇದು  ಪೂರ್ವಾಪೇಕ್ಷಿತವಲ್ಲ ಎಂದು ಸೀತಾರಾಮನ್ ಹೇಳಿದರು, ಏಕೆಂದರೆ 90 ಪ್ರತಿಶತ ಹಣವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಉಳಿದ ಮೊತ್ತವನ್ನು ನಂತರ ನೀಡಲಾಗುತ್ತದೆ. ಎಜಿ ಪ್ರಮಾಣಪತ್ರ ಸಲ್ಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು