News Karnataka Kannada
Sunday, April 28 2024
ದೆಹಲಿ

ಗುರುದ್ವಾರದ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ವಿದೇಶಾಂಗ ಸಚಿವ ಜೈ ಶಂಕರ್‌!

Jai Shankar
Photo Credit : IANS

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಗುರುದ್ವಾರ ಕಾರ್ಟೆ ಪರ್ವಾನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತೀವ್ರವಾಗಿ ಖಂಡಿಸಿದ್ದಾರೆ.

ಭಾರತದ ಅಗ್ರಗಣ್ಯ ಕಾಳಜಿ ಸಮುದಾಯದ ಕಲ್ಯಾಣ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದಿದ್ದಾರೆ.

ಈ ಕುರಿತು ತಮ್ಮ ಹೇಳಿಕೆಯಲ್ಲಿ “ಗುರುದ್ವಾರ ಕರ್ತೆ ಪರ್ವಾನ್ ಮೇಲಿನ ಹೇಡಿತನದ ದಾಳಿಯನ್ನು ಎಲ್ಲರೂ ತೀವ್ರವಾಗಿ ಖಂಡಿಸಬೇಕು. ದಾಳಿಯ ಸುದ್ದಿ ಬಂದ ನಂತರ ನಾವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಮೊದಲ ಮತ್ತು ಅಗ್ರಗಣ್ಯ ಕಾಳಜಿ ಸಮುದಾಯದ ಕಲ್ಯಾಣವಾಗಿದೆ” ಎಂದು ಹೇಳಿದ್ದಾರೆ.

ಕಾಬೂಲ್‌ ನಲ್ಲಿರುವ ಕಾರ್ಟೆ ಪರ್ವಾನ್‌ ಗುರುದ್ದವಾರದ ಮೇಲೆ ಇಂದು ಮುಂಜಾನೆ 8.30ರ ಸುಮಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದು ದಾಳಿಯ ಹಿಂದೆ ಐಸಿಸ್‌ ಉಗ್ರ ಸಂಘಟನೆಯ ಕೈವಾಡವನ್ನು ಗುರುತಿಸಲಾಗಿದೆ. ಘಟನೆಯಲ್ಲಿ ಸಾವಿಂದರ್ ಸಿಂಗ್ ಎಂಬ 60 ವರ್ಷದ ವ್ಯಕ್ತಿ ಹಾಗೂ ಗುರುದ್ವಾರದ ಗೇಟಿನ ಬಳಿಯಿದ್ದ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕನಿಷ್ಠ 7-8 ಜನರು ಇನ್ನೂ ಒಳಗೆ ಸಿಲುಕಿಕೊಂಡಿರುವುದಾಗಿ ಮೂಲಗಳು ವರದಿ ಮಾಡಿವೆ. ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು