ಅಫ್ಘಾನಿಸ್ತಾನದ ಕಾಬೂಲ್ನಲ್ಲಿರುವ ಗುರುದ್ವಾರ ಕಾರ್ಟೆ ಪರ್ವಾನ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತೀವ್ರವಾಗಿ ಖಂಡಿಸಿದ್ದಾರೆ.
ಭಾರತದ ಅಗ್ರಗಣ್ಯ ಕಾಳಜಿ ಸಮುದಾಯದ ಕಲ್ಯಾಣ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದಿದ್ದಾರೆ.
ಈ ಕುರಿತು ತಮ್ಮ ಹೇಳಿಕೆಯಲ್ಲಿ “ಗುರುದ್ವಾರ ಕರ್ತೆ ಪರ್ವಾನ್ ಮೇಲಿನ ಹೇಡಿತನದ ದಾಳಿಯನ್ನು ಎಲ್ಲರೂ ತೀವ್ರವಾಗಿ ಖಂಡಿಸಬೇಕು. ದಾಳಿಯ ಸುದ್ದಿ ಬಂದ ನಂತರ ನಾವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಮೊದಲ ಮತ್ತು ಅಗ್ರಗಣ್ಯ ಕಾಳಜಿ ಸಮುದಾಯದ ಕಲ್ಯಾಣವಾಗಿದೆ” ಎಂದು ಹೇಳಿದ್ದಾರೆ.
ಕಾಬೂಲ್ ನಲ್ಲಿರುವ ಕಾರ್ಟೆ ಪರ್ವಾನ್ ಗುರುದ್ದವಾರದ ಮೇಲೆ ಇಂದು ಮುಂಜಾನೆ 8.30ರ ಸುಮಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದು ದಾಳಿಯ ಹಿಂದೆ ಐಸಿಸ್ ಉಗ್ರ ಸಂಘಟನೆಯ ಕೈವಾಡವನ್ನು ಗುರುತಿಸಲಾಗಿದೆ. ಘಟನೆಯಲ್ಲಿ ಸಾವಿಂದರ್ ಸಿಂಗ್ ಎಂಬ 60 ವರ್ಷದ ವ್ಯಕ್ತಿ ಹಾಗೂ ಗುರುದ್ವಾರದ ಗೇಟಿನ ಬಳಿಯಿದ್ದ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಕನಿಷ್ಠ 7-8 ಜನರು ಇನ್ನೂ ಒಳಗೆ ಸಿಲುಕಿಕೊಂಡಿರುವುದಾಗಿ ಮೂಲಗಳು ವರದಿ ಮಾಡಿವೆ. ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಒತ್ತಾಯಿಸಿದ್ದಾರೆ.
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…