ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ಬಾರಿ 1,500ಕ್ಕೂ ಅಧಿಕ ರೈತರನ್ನು ಗಣರಾಜ್ಯೋತ್ಸವ ಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಎಲ್ಲಾ 1500 ಕ್ಕೂ ಹೆಚ್ಚು ರೈತರು ದೆಹಲಿಯ ಕರ್ತವ್ಯಪಥದಲ್ಲಿ ಆಯೋಜಿಸಲಾಗಿರುವ 75 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಪರೇಡ್ನಲ್ಲಿ ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಕೃಷಿ ಮತ್ತು ಮೀನುಗಾರಿಕೆಯಲ್ಲಿ ತೊಡಗಿರುವ ರೈತರು ಭಾಗಿಯಾಗಲಿದ್ದಾರೆ.
ಜಾರ್ಖಂಡ್ನ ರೈತರಿಗೂ ಆಹ್ವಾನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಾರ್ಖಂಡ್ನ ಏಳು ಮೀನು ಕೃಷಿಕ ದಂಪತಿಗಳನ್ನು ಸಹ ಆಹ್ವಾನಿಸಲಾಗಿದೆ.
ಈ ಮೀನು ಕೃಷಿಕರು ಮತ್ತು ಅವರ ಪತ್ನಿಯರನ್ನು ಕೇಂದ್ರ ಸರ್ಕಾರ ವಿಶೇಷ ಅತಿಥಿಗಳಾಗಿ ಆಹ್ವಾನಿಸಿದೆ. ರೈತರು ವಿಮಾನದಲ್ಲಿ ಹೋಗುತ್ತಾರೆ ಈ ನಿಟ್ಟಿನಲ್ಲಿ ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದಿಂದ ಮೀನು ಕೃಷಿಕರನ್ನು ಆಹ್ವಾನಿತ ಅತಿಥಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಜಾರ್ಖಂಡ್ನ ಮೀನುಗಾರಿಕೆ ನಿರ್ದೇಶನಾಲಯದ ನಿರ್ದೇಶಕ ಡಾ.ಎಚ್.ಎನ್.ದ್ವಿವೇದಿ ಹೇಳಿದ್ದಾರೆ.