News Karnataka Kannada
Friday, May 03 2024
ದೆಹಲಿ

ಅಗ್ನಿ ಅವಘಡ : ಉಸಿರುಗಟ್ಟಿ ಇಬ್ಬರು ಸಹೋದರಿಯರ ದುರ್ಮರಣ

ದೆಹಲಿಯಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಉತ್ತರ ದೆಹಲಿಯ ಸದರ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಮಂಗಳವಾರ (ಏಪ್ರಿಲ್‌ 2) ಬೆಂಕಿ ಕಾಣಿಸಿಕೊಂಡಿದ್ದು, 14 ವರ್ಷದ ಬಾಲಕಿ ಮತ್ತು ಆಕೆಯ 12 ವರ್ಷದ ಸಹೋದರಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Photo Credit : NewsKarnataka

ನವದೆಹಲಿ: ದೆಹಲಿಯಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಉತ್ತರ ದೆಹಲಿಯ ಸದರ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಮಂಗಳವಾರ (ಏಪ್ರಿಲ್‌ 2) ಬೆಂಕಿ ಕಾಣಿಸಿಕೊಂಡಿದ್ದು, 14 ವರ್ಷದ ಬಾಲಕಿ ಮತ್ತು ಆಕೆಯ 12 ವರ್ಷದ ಸಹೋದರಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗುಲಾಶ್ನಾ (14) ಮತ್ತು ಅನಾಯಾ (12) ಎಂದು ಗುರುತಿಸಲಾಗಿದೆ.

ಮಂಗಳವಾರ ಅಪರಾಹ್ನ ಸುಮಾರು 2 ಗಂಟೆಗೆ ನಮಗೆ ತುರ್ತು ಕರೆ ಬಂದಿತ್ತು. ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಮಾಡಿದವರು ತಿಳಿಸಿದ್ದು, ಐದು ಅಗ್ನಿಶಾಮಕ ವಾಹನಗಳನ್ನು ಒದಗಿಸುವಂತೆ ಕೇಳಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಕಾಣಿಸಿಕೊಂಡ ಕಟ್ಟಡದಿಂದ ಕೆಲವರನ್ನು ರಕ್ಷಿಸಿದ್ದಾರೆ. ನಾವು ಪೊಲೀಸರಿಗೂ ಮಾಹಿತಿ ನೀಡಿದ್ದೇವೆ” ಎಂದು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದರ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿಯೂ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಮೃತ ಸಹೋದರಿಯರಾದ ಗುಲಾಶ್ನಾ ಮತ್ತು ಅನಾಯಾ ಮೊದಲ ಮಹಡಿಯ ಬಾತ್‌ರೂಮ್‌ನಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು