News Karnataka Kannada
Friday, May 03 2024
ದೆಹಲಿ

ನವದೆಹಲಿ: ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ, ಇಬ್ಬರು ಸಾವು

ರೈಸಿನಾ ಹಿಲ್ಸ್‌ ಪ್ರದೇಶದಲ್ಲಿರುವ ನಾರ್ತ್​ ಬ್ಲಾಕ್​ನಲ್ಲಿರುವ ಗೃಹ ಸಚಿವಾಲಯದ ಕಚೇರಿಯಲ್ಲಿ ಇಂದು ಬೆಳಗ್ಗೆ 9.22ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
Photo Credit : Pixabay

ನವದೆಹಲಿ: ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ -2ರ ವೃದ್ಧಾಶ್ರಮ ಕೇಂದ್ರದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮಾಹಿತಿಯ ಪ್ರಕಾರ, ಅಗ್ನಿಶಾಮಕ ಇಲಾಖೆಗೆ ಬೆಳಿಗ್ಗೆ 5.15 ರ ಸುಮಾರಿಗೆ ಘಟನೆಯ ಕರೆ ಬಂದಿದೆ. ಕರೆ ಬಂದ ಕೂಡಲೇ ಅಗ್ನಿಶಾಮಕ ಇಲಾಖೆ ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ಎಂಜಿನ್ ಗಳನ್ನು ಕಳುಹಿಸಿದೆ.

“ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇಲ್ಲಿ ವೃದ್ಧಾಪ್ಯ ಆರೈಕೆ ಕೇಂದ್ರವನ್ನು ನಡೆಸಲಾಗುತ್ತಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇತರ ಆರು ಜನರನ್ನು ಸ್ಥಳದಿಂದ ರಕ್ಷಿಸಿದ್ದೇವೆ” ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿತ್ತು. ಬೆಂಕಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಎಂಟು ಜನರು ಸಿಕ್ಕಿಬಿದ್ದಿದ್ದಾರೆ, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ, ಆದರೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು