News Karnataka Kannada
Monday, April 29 2024
ದೆಹಲಿ

ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಸೇವೆ ಆರಂಭ

Flight services from Bengaluru to Ayodhya begin
Photo Credit : News Kannada

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಬೆಂಗಳೂರಿನಿಂದ ಅಯೋಧ್ಯೆಗೆ ತೆರಳುವ ಮಂದಿಗೆ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಅಯೋಧ್ಯೆ ನೇರ ವಿಮಾನ ಸೇವೆ ನೀಡುವುದಾಗಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪ್ರಕಟಿಸಿದೆ.

ದೇಶದ ಮೂರು ಮಹಾನಗರಗಳಿಂದ ಅಯೋಧ್ಯೆಯಲ್ಲಿರುವ ಮಹರ್ಷಿ ವಾಲ್ಮಿಕಿ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣಕ್ಕೆ ವಿಮಾನ ಸಂಪರ್ಕ ಕಲ್ಪಿಸುವುದಾಗಿ ಏರ್‌ ಇಂಡಿಯಾ ಹೇಳಿದೆ.

ಮೊದಲ ವಿಮಾನ ಡಿ.30 ರಂದು ದೆಹಲಿ ಮತ್ತು ಅಯೋಧ್ಯೆ ಮಧ್ಯೆ ಹಾರಲಿದ್ದರೆ ಜ.17 ರಿಂದ ಬೆಂಗಳೂರು- ಅಯೋಧ್ಯೆ, ಕೋಲ್ಕತ್ತಾ – ಅಯೋಧ್ಯೆ ಮಧ್ಯೆ ಹಾರಾಟ ನಡೆಸಲಿದೆ.

ಬೆಂಗಳೂರಿನಿಂದ ಬೆಳಗ್ಗೆ 8:05ಕ್ಕೆ ಟೇಕಾಫ್‌ ಆದರೆ ಅಯೋಧ್ಯೆಯಲ್ಲಿ ಬೆಳಗ್ಗೆ 10:35ಕ್ಕೆ ಲ್ಯಾಂಡ್‌ ಆಗಲಿದೆ. ಮಧ್ಯಾಹ್ನ 03:40ಕ್ಕೆ ಅಯೋಧ್ಯೆಯಿಂದ ಟೇಕಾಫ್‌ ಆಗುವ ವಿಮಾನ ಸಂಜೆ 06:10ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು