ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಬೆಂಗಳೂರಿನಿಂದ ಅಯೋಧ್ಯೆಗೆ ತೆರಳುವ ಮಂದಿಗೆ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಅಯೋಧ್ಯೆ ನೇರ ವಿಮಾನ ಸೇವೆ ನೀಡುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಕಟಿಸಿದೆ.
ದೇಶದ ಮೂರು ಮಹಾನಗರಗಳಿಂದ ಅಯೋಧ್ಯೆಯಲ್ಲಿರುವ ಮಹರ್ಷಿ ವಾಲ್ಮಿಕಿ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣಕ್ಕೆ ವಿಮಾನ ಸಂಪರ್ಕ ಕಲ್ಪಿಸುವುದಾಗಿ ಏರ್ ಇಂಡಿಯಾ ಹೇಳಿದೆ.
ಮೊದಲ ವಿಮಾನ ಡಿ.30 ರಂದು ದೆಹಲಿ ಮತ್ತು ಅಯೋಧ್ಯೆ ಮಧ್ಯೆ ಹಾರಲಿದ್ದರೆ ಜ.17 ರಿಂದ ಬೆಂಗಳೂರು- ಅಯೋಧ್ಯೆ, ಕೋಲ್ಕತ್ತಾ – ಅಯೋಧ್ಯೆ ಮಧ್ಯೆ ಹಾರಾಟ ನಡೆಸಲಿದೆ.
ಬೆಂಗಳೂರಿನಿಂದ ಬೆಳಗ್ಗೆ 8:05ಕ್ಕೆ ಟೇಕಾಫ್ ಆದರೆ ಅಯೋಧ್ಯೆಯಲ್ಲಿ ಬೆಳಗ್ಗೆ 10:35ಕ್ಕೆ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 03:40ಕ್ಕೆ ಅಯೋಧ್ಯೆಯಿಂದ ಟೇಕಾಫ್ ಆಗುವ ವಿಮಾನ ಸಂಜೆ 06:10ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ