News Karnataka Kannada
Thursday, May 02 2024
ದೆಹಲಿ

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

Former CM Bommai
Photo Credit : News Kannada

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ವಿಧಾನಸಭೆ ಚುನಾವಣೆಯ ನಂತರ ಮೊದಲ ಬಾರಿಗೆ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

‘ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿದೆನು’ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.

ಇನ್ನು ಕಳೆದ ದಿನ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬೊಮ್ಮಾಯಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಹೇಳಿದ್ದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ, ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವು. ಲೋಕಸಭೆಗೆ ವಿಚಾರಗಳು ಬೇರೆ ಇರುತ್ತವೆ. ನಾವು 25 ಸ್ಥಾನಗಳನ್ನು ಉಳಿಸಿಕೊಳ್ಳಲು ತಯಾರಿ ಮಾಡಿಕೊಳ್ಳೇವೆ ಎಂದು ಕಳೆದ ದಿನ ಹೇಳಿದ್ದರು. ನಾನು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಂಸದರು ಮನವಿ ಮಾಡಿದ್ದರು. ಈ ಹಿನ್ನಲೆ ದೆಹಲಿಗೆ ಆಗಮಿಸಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆ. ಅಮಿತ್ ಶಾ ಭೇಟಿಗೂ ಪ್ರಯತ್ನ ಮಾಡುತ್ತೇನೆ ಎಂದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು