ನವದೆಹಲಿ: ಚುನಾವಣೆ ಹೊತ್ತಲ್ಲೇ ಕೈಗಾರಿಕೋದ್ಯಮಿ ಮತ್ತು ಕಾಂಗ್ರೆಸ್ ಮಾಜಿ ನಾಯಕ ನವೀನ್ ಜಿಂದಾಲ್ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನಾನು 10 ವರ್ಷಗಳ ಕಾಲ ಕುರುಕ್ಷೇತ್ರ ಕ್ಷೇತ್ರದಿಂದ ಸಂಸದನಾಗಿ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದ್ದೇನೆ. ನಾನು ಕಾಂಗ್ರೆಸ್ ನಾಯಕತ್ವ ಮತ್ತು ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಿಂದಾಲ್ ತಿಳಿಸಿದ್ದಾರೆ.
ಈಗ ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಅದಾದ ಬಳಿಕ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್ಕೆಎಸ್ ಬದೌರಿಯಾ ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಜಿಂದಾಲ್ ಅವರ ಪ್ರವೇಶವಾಗಿದೆ.