ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಭಾನುವಾರ ಅವರ ನಿವಾಸದಲ್ಲಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ , ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನವು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ರಾಷ್ಟ್ರಪತಿಗಳು ಹಿರಿಯ ನಾಯಕರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿದ್ದಂತೆ ಪ್ರಧಾನಿ ಮೋದಿ ಅವರು ಅಡ್ವಾಣಿ ಅವರ ಪಕ್ಕದಲ್ಲಿ ಕುಳಿತಿರುವುದನ್ನು ಫೋಟೊದಲ್ಲಿ ಕಾಣಬಹುದು.
“ಭಾರತದ ಸಾಂಸ್ಕೃತಿಕ ಪುನರುತ್ಥಾನಕ್ಕಾಗಿ ಅವರ ಸುದೀರ್ಘ ಮತ್ತು ದಣಿವರಿಯದ ಹೋರಾಟವು 2024 ರಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪುನರ್ನಿರ್ಮಾಣಕ್ಕೆ ಕಾರಣವಾಯಿತು”. ಸ್ವಾತಂತ್ರ್ಯಾನಂತರದ ಬೆರಳೆಣಿಕೆಯಷ್ಟು ರಾಜಕೀಯ ನಾಯಕರಲ್ಲಿ ರಾಷ್ಟ್ರೀಯ ಕಾರ್ಯಸೂಚಿಯನ್ನು ಮರುರೂಪಿಸುವಲ್ಲಿ ಮತ್ತು ಅದನ್ನು ಅಭಿವೃದ್ಧಿಯ ಪಥದಲ್ಲಿ ಇರಿಸುವಲ್ಲಿ ಅವರು ಯಶಸ್ವಿಯಾದರು. ಅಡ್ವಾಣಿಯವರ ಸಾಧನೆಗಳು ಭಾರತದ ಪ್ರತಿಭೆ ಮತ್ತು ಅದರ ಅಂತರ್ಗತ ಸಂಪ್ರದಾಯಗಳ ಅತ್ಯುತ್ತಮ ಅಭಿವ್ಯಕ್ತಿಯನ್ನು ಒದಗಿಸುತ್ತವೆ ಎಂದು ರಾಷ್ಟ್ರಪತಿ ಭವನ ಫೋಟೊಗಳೊಂದಿಗೆ ಸರಣಿ ಟ್ವೀಟ್ ಮಾಡಿದೆ.
It was very special to witness the conferring of the Bharat Ratna upon Shri LK Advani Ji. This honour is a recognition of his enduring contributions to our nation’s progress. His dedication to public service and his pivotal role in shaping modern India have left an indelible mark… pic.twitter.com/ijVvAUrvFs
— Narendra Modi (@narendramodi) March 31, 2024