ಹೊಸದಿಲ್ಲಿ: ಜೈಲಿನಲ್ಲಿರುವ ಎಎಪಿ ನಾಯಕ ಮತ್ತು ದೆಹಲಿ ಸರ್ಕಾರದ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಿಂದ ಎಲ್ಎನ್ಜೆಪಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ತಿಹಾರ್ ಜೈಲಿನ ವಾಶ್ರೂಮ್ನಲ್ಲಿ ಜಾರಿಬಿದ್ದು ಗಾಯಗೊಂಡಿದ್ದರು.
ಅಧಿಕಾರಿಯೊಬ್ಬರ ಪ್ರಕಾರ, ಗುರುವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ, ಜೈನ್ ಅವರು ಬಾತ್ರೂಮ್ನಲ್ಲಿ ಜಾರಿಬಿದ್ದಿದ್ದರು. ಜೈನ್ ಅವರನ್ನು ಕೇಂದ್ರ ಕಾರಾಗೃಹ ಸಂಖ್ಯೆ 7 ರಲ್ಲಿ ಇರಿಸಲಾಗಿತ್ತು. “ನಂತರ ಅವರನ್ನು ವೈದ್ಯರು ಪರೀಕ್ಷಿಸಿದ್ದು, ಬೆನ್ನು, ಎಡಗಾಲು ಮತ್ತು ಭುಜದಲ್ಲಿ ನೋವಿನ ಬಗ್ಗೆ ದೂರು ನೀಡಿದ್ದರಿಂದ ಅವರನ್ನು ಡಿಡಿಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಎಪಿ ಯ ಮೂಲಗಳ ಪ್ರಕಾರ, ಜೈನ್ ಆರೋಗ್ಯ ಸ್ಥಿತಿಯು ಹದಗೆಟ್ಟಿದೆ ಎಂದು ಹೇಳಿದೆ.