ದೆಹಲಿ: ತೈಲ ಟ್ಯಾಂಕರ್, ಕಾರು ಮತ್ತು ಪಿಕಪ್ ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ (ನ.10) ರಾತ್ರಿ ದೆಹಲಿ-ಜೈಪುರ ಹೆದ್ದಾರಿಯ ಗುರುಗ್ರಾಮ್ನ ಸಿದ್ರಾವಲಿ ಗ್ರಾಮದ ಬಳಿ ನಡೆದಿದೆ.
ಜೈಪುರದಿಂದ ಬರುತ್ತಿದ್ದ ತೈಲ ಟ್ಯಾಂಕರ್ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರಿಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನೊಳಗಿದ್ದ ಸಿಎನ್ಜಿ ಸಿಲಿಂಡರ್ ಸ್ಫೋಟಗೊಂಡು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಹಿಂದೆ ಬರುತ್ತಿದ್ದ ಪಿಕಪ್ ವ್ಯಾನ್ಗೆ ಡಿಕ್ಕಿ ಹೊಡೆದಿದ್ದು, ಇದ್ದರಿಂದ ವ್ಯಾನ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಚಾರ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸ್ಥಳದಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಮೂವರು ಕೂಡ ಬೆಂಕಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ಟ್ಯಾಂಕರ್ ಪಿಕಪ್ ವ್ಯಾನ್ಗೂ ಡಿಕ್ಕಿ ಹೊಡೆದಿದ್ದು, ವ್ಯಾನ್ ಚಾಲಕ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.