News Karnataka Kannada
Wednesday, May 01 2024
ದೆಹಲಿ

ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ‘ಆಕ್ಸೆಲ್‌’ಗೆ ಶೌರ್ಯ ಪ್ರಶಸ್ತಿ ಘೋಷಣೆ

Aksella
Photo Credit :

ದೆಹಲಿ: ಇತ್ತೀಚೆಗಷ್ಟೇ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ‘ಆಕ್ಸೆಲ್’ ಹೆಸರಿನ ನಾಯಿಗೆ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿ ಘೋಷಿಸಿದೆ. ಎರಡು ವರ್ಷದ ಆಕ್ಸೆಲ್‌ಗೆ ಸೇನೆಯಿಂದ ಹಲವು ವಿಧಗಳಲ್ಲಿ ತರಬೇತಿ ನೀಡಲಾಗಿತ್ತು.

ಈ ಶ್ವಾನ ಸ್ಫೋಟಕಗಳನ್ನು ಹಾಗೂ ಭಯೋತ್ಪಾದಕರ ಚಲನವಲನಗಳನ್ನು ಪತ್ತೆ ಹಚ್ಚಿ ದಾಳಿ ನಡೆಸುತ್ತವೆ. ಸೇನೆಯು ನಡೆಸುವ ಕಾರ್ಯಾಚರಣೆಗಳಲ್ಲಿ ಶ್ವಾನಗಳು ಪ್ರಮುಖ ಪಾತ್ರ ವಹಿಸುತ್ತದೆ.

ಕಳೆದ ತಿಂಗಳ 30 ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿತ್ತು. ಉಗ್ರರನ್ನು ಹಿಡಿಯಲು ಸೇನೆ ಯತ್ನಿಸಿತು. ಈ ಸಂದರ್ಭದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಭಯೋತ್ಪಾದಕರ ವಿರುದ್ಧ ಹೋರಾಡಲು ಆಕ್ಸೆಲ್ ಕೂಡ ಸೇನೆಗೆ ನೆರವಾಗಿತ್ತು. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಆಕ್ಸೆಲ್ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಆಕ್ಸೆಲ್‌ಗೆ ಸೈನ್ಯದಿಂದ ಗೌರವಯುತ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕೇಂದ್ರ ಇತ್ತೀಚೆಗೆ ಪ್ರಕಟಿಸಿದ ಶೌರ್ಯ ಪ್ರಶಸ್ತಿ ಪಟ್ಟಿಯಲ್ಲಿ ಆಕ್ಸೆಲ್ ಗೆ ಸ್ಥಾನ ಸಿಕ್ಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು