ನವದೆಹಲಿ: ಗೌತಮ್ ಗಂಭೀರ್ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಸದ್ಯ ಇವರು ಪೂರ್ವ ದೆಹಲಿಯ ಬಿಜೆಪಿ ಸಂಸದರಾಗಿದ್ದರು.
ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. 2019 ರ ಲೋಕಸಭಾ ಚುನಾವಣೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಆಗಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು.
ಜೆಪಿ ನಡ್ಡಾ ಅವರಿಗೆ ರಾಜಕೀಯ ಚಟುವಟಿಕೆಗಳಿಂದ ಮುಕ್ತಿ ನೀಡುವಂತೆ ಮನವಿ ಮಾಡುತ್ತಿದ್ದೇನೆ. ಇದರಿಂದಾಗಿ ನಾನು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಗಮನಹರಿಸಬಹುದಾಗಿದೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್! ಎಂದು ಗಂಭೀರ್ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
I have requested Hon’ble Party President @JPNadda ji to relieve me of my political duties so that I can focus on my upcoming cricket commitments. I sincerely thank Hon’ble PM @narendramodi ji and Hon’ble HM @AmitShah ji for giving me the opportunity to serve the people. Jai Hind!
— Gautam Gambhir (@GautamGambhir) March 2, 2024