News Karnataka Kannada
Sunday, April 28 2024
ದೆಹಲಿ

ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆಗೆ ಹೆಚ್ಚಿನ ಅವಧಿ ಕೇಳಿದ ಎಎಸ್‌ಐ

Gyanvapi
Photo Credit : News Kannada

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ಬೇಕು ಎಂದು ವಾರಾಣಸಿ ನ್ಯಾಯಾಲಯಕ್ಕೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮನವಿ ಮಾಡಿದೆ.

ಕೋರ್ಟ್‌ ಆದೇಶದ ಮೇರೆಗೆ ಮಸೀದಿಯಲ್ಲಿ ಆಗಸ್ಟ್‌ 5ರಿಂದ ವೈಜ್ಞಾನಿಕ ಸಮೀಕ್ಷೆ ಆರಂಭಿಸಲಾಗಿದ್ದು, ಸಮೀಕ್ಷೆ ಮುಗಿದಿದೆ. ಆದರೆ, ವರದಿ ಸಲ್ಲಿಸಲು ಹೆಚ್ಚಿನ ಅವಧಿ ಬೇಕು ಎಂದು ಎಎಸ್‌ಐ ಮನವಿ ಮಾಡಿದೆ.

ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿಯನ್ನು ವಾರಾಣಸಿ ನ್ಯಾಯಾಲಯಕ್ಕೆ ಶುಕ್ರವಾರ (ನವೆಂಬರ್‌ 17) ಸಲ್ಲಿಸಬೇಕಿತ್ತು. ಆದರೆ, ಈಗ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಹೆಚ್ಚಿನ ಕಾಲಾವಕಾಶ ಕೇಳಿದೆ. ದೇವಾಲಯ ಇತ್ತು ಎಂಬುದರ ಕುರುಹುಗಳಾಗಿ ತ್ರಿಶೂಲ, ಸ್ವಸ್ತಿಕ್‌, ಗಂಟೆ, ಕಮಲದ ಆಕೃತಿ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಹಾಗಾಗಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಲ್ಲಿಸುವ ಸಮೀಕ್ಷಾ ವರದಿಯು ಕುತೂಹಲ ಕೆರಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು