ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ಬೇಕು ಎಂದು ವಾರಾಣಸಿ ನ್ಯಾಯಾಲಯಕ್ಕೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮನವಿ ಮಾಡಿದೆ.
ಕೋರ್ಟ್ ಆದೇಶದ ಮೇರೆಗೆ ಮಸೀದಿಯಲ್ಲಿ ಆಗಸ್ಟ್ 5ರಿಂದ ವೈಜ್ಞಾನಿಕ ಸಮೀಕ್ಷೆ ಆರಂಭಿಸಲಾಗಿದ್ದು, ಸಮೀಕ್ಷೆ ಮುಗಿದಿದೆ. ಆದರೆ, ವರದಿ ಸಲ್ಲಿಸಲು ಹೆಚ್ಚಿನ ಅವಧಿ ಬೇಕು ಎಂದು ಎಎಸ್ಐ ಮನವಿ ಮಾಡಿದೆ.
ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿಯನ್ನು ವಾರಾಣಸಿ ನ್ಯಾಯಾಲಯಕ್ಕೆ ಶುಕ್ರವಾರ (ನವೆಂಬರ್ 17) ಸಲ್ಲಿಸಬೇಕಿತ್ತು. ಆದರೆ, ಈಗ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಹೆಚ್ಚಿನ ಕಾಲಾವಕಾಶ ಕೇಳಿದೆ. ದೇವಾಲಯ ಇತ್ತು ಎಂಬುದರ ಕುರುಹುಗಳಾಗಿ ತ್ರಿಶೂಲ, ಸ್ವಸ್ತಿಕ್, ಗಂಟೆ, ಕಮಲದ ಆಕೃತಿ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಹಾಗಾಗಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಲ್ಲಿಸುವ ಸಮೀಕ್ಷಾ ವರದಿಯು ಕುತೂಹಲ ಕೆರಳಿಸಿದೆ.
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…