News Karnataka Kannada
Monday, April 29 2024
ದೆಹಲಿ

ದ್ವೇಷ ಭಾಷಣ ಪ್ರಕರಣ: ಪರಿಶೀಲನೆ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಸೂಚನೆ

ಸುಪ್ರೀಂ ಕೋರ್ಟ್  14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 30ನೇ ವಾರದಲ್ಲಿ ಗರ್ಭಪಾತ ಮಾಡಲು ಅನುಮತಿ ನೀಡಿದೆ.
Photo Credit : IANS

ನವದೆಹಲಿ: ದೇಶಾದ್ಯಂತ ದ್ವೇಷ ಭಾಷಣ ಪ್ರಕರಣಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸಲ್ಲಿಸಿದ ಅರ್ಜಿಯೊಂದರಲ್ಲಿ, ದೇಶಾದ್ಯಂತ ನಡೆದ ರ‍್ಯಾಲಿಗಳಲ್ಲಿ ಒಂದು ಸಮುದಾಯದ ಸದಸ್ಯರನ್ನು ಕೊಲ್ಲಲು ಮತ್ತು ಅವರ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡುವ ” ದ್ವೇಷದ ಭಾಷಣಗಳನ್ನು” ಹತ್ತಿಕ್ಕಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಹರಿಯಾಣದಲ್ಲಿ ಕಳೆದ ವಾರ ನಡೆದ ಕೋಮು ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಈ ನಿಟ್ಟಿನಲ್ಲಿ ಆದೇಶ ಪ್ರಾಮುಖ್ಯತೆ ಪಡೆದಿದೆ.

ಸಮುದಾಯಗಳ ನಡುವೆ ಸಾಮರಸ್ಯ ಮತ್ತು ಸೌಹಾರ್ದತೆ ಇರಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ ಹೇಳಿದೆ. ಸಮುದಾಯಗಳ ನಡುವೆ ಸೌಹಾರ್ದತೆ ಇರಬೇಕು. ಇದಕ್ಕೆ ಎಲ್ಲ ಸಮುದಾಯಗಳು ಜವಾಬ್ದಾರರು. ದ್ವೇಷ ಭಾಷಣವನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಗಸ್ಟ್ 18ರೊಳಗೆ ಸಮಿತಿಯ ಕುರಿತು ಸೂಚನೆಗಳನ್ನು ಪಡೆದು ಉತ್ತರ ನೀಡುವಂತೆ ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರಿಗೆ ನ್ಯಾಯಾಲಯ ತಿಳಿಸಿದೆ.

ವೀಡಿಯೋ ಸೇರಿದಂತೆ ಎಲ್ಲ ವಿಷಯಗಳನ್ನು ಕ್ರೋಡೀಕರಿಸಿ ನೋಡಲ್ ಅಧಿಕಾರಿಗಳಿಗೆ ನೀಡುವಂತೆ ಅರ್ಜಿದಾರರಿಗೆ ಪೀಠ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು