News Karnataka Kannada
Saturday, May 04 2024
ದೆಹಲಿ

ನವದೆಹಲಿ: ದೇಶವಿರೋಧಿ ಹೇಳಿಕೆ ನೀಡಿಲ್ಲ- ರಾಹುಲ್‌ ಗಾಂಧಿ

Haven't spoken against India, will speak in House if allowed: Rahul
Photo Credit : News Kannada

ನವದೆಹಲಿ: ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೊರದೇಶದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿಲ್ಲ. ಸದನದೊಳಗೆ ಅವಕಾಶ ನೀಡಿದರೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಯುಕೆ ಭಾಷಣಕ್ಕಾಗಿ ಕ್ಷಮೆಯಾಚಿಸುತ್ತೀರಾ ಎಂದು ಸಂಸತ್ತಿನಲ್ಲಿ ಸುದ್ದಿಗಾರರು ಕೇಳಿದಾಗ ಗಾಂಧಿ ನಸುನಗುತ್ತಾ ಪ್ರತಿಕ್ರಿಯೆ ನೀಡಿದರು. ನಾನು ಭಾರತ ವಿರೋಧಿಯಾಗಿ ಏನನ್ನೂ ಮಾತನಾಡಿಲ್ಲ ಎಂದರು. ಮಾರ್ಚ್ 13 ರಂದು ಆರಂಭವಾದ ಬಜೆಟ್‌ ಅಧಿವೇಶಕ್ಕಾಗಿ ಮೊದಲ ಬಾರಿಗೆ ರಾಹುಲ್‌ ಸಂಸತ್ತಿಗೆ ಆಗಮಿಸಿದರು. ಇದಕ್ಕೂ ಮುನ್ನ ಉಭಯ ಸದನಗಳನ್ನು ಗುರುವಾರ
ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು.

ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷದ ಸದಸ್ಯರು ಅದಾನಿ ಪ್ರಕರಣದಲ್ಲಿ ಜೆಪಿಸಿ ತನಿಖೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಭಿತ್ತಿಪತ್ರಗಳನ್ನು ಹಿಡಿದು ಸದನದ ಬಾವಿಗೆ ನುಗ್ಗಿದರು. ಕಳೆದ ವಾರ ಲಂಡನ್‌ನಲ್ಲಿಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವಿದೆ ಎಂದು ಹೇಳಿದ್ದಕ್ಕಾಗಿ ಕ್ಷಮೆಯಾಚಿಸುವಂತೆ ಕೋರಿ ಬಿಜೆಪಿಗರು ಘೋಷಣೆ ಕೂಗಿದ್ದರು. ಗೊಂದಲದ ದೃಶ್ಯಗಳ ನಡುವೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು