News Karnataka Kannada
Tuesday, April 30 2024
ದೆಹಲಿ

ಮರುಭೂಮಿ ನಾಡಲ್ಲಿ ಧಾರಾಕಾರ ಮಳೆ: ದುಬೈ ಏರ್‌ಪೋರ್ಟ್‌ ಮುಳುಗಡೆ

ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
Photo Credit : NewsKarnataka

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರವಾಹದಿಂದಾಗಿ ಹಲವು ನಗರಗಳಿಗೆ ಹಾನಿಯಾಗಿದ್ದು, ನೆರೆಯ ರಾಷ್ಟ್ರ ಒಮಾನ್ ನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ 18 ಮಂದಿ ಸಾವು ಕಂಡಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹವು ದುಬೈನ ಸಂಚಾರದ ಮೇಲೆ ಹೆಚ್ಚಿನ ಪರಿಣಾಮ ಬೀರಿದ್ದು, ರಸ್ತೆ ಸಂಚಾರ ಮತ್ತು ವಿಮಾನ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ. ದುಬೈ ವಿಮಾನ ನಿಲ್ದಾಣ ನೀರಿನಿಂದ ಮುಳುಗಿಹೋಗಿದೆ.

ಹಲವು ವಿಮಾನಗಳ ಹಾರಾಟವನ್ನೂ ರದ್ದುಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಸೋಮವಾರ, ದುಬೈ ಪೊಲೀಸರು ಕೆಟ್ಟ ಹವಾಮಾನದ ಬಗ್ಗೆ ಸಾರ್ವಜನಿಕ ಎಚ್ಚರಿಕೆಯನ್ನೂ ನೀಡಿದ್ದರು. ದುಬೈ ಮತ್ತು ಅಬುಧಾಬಿ ಸೇರಿದಂತೆ ಹಲವು ದೊಡ್ಡ ನಗರಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಮಳೆ ಬೀಳಲಿದೆ ಎಂದು ಯುಎಇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು.

ಮಂಗಳವಾರ ಮಧ್ಯಾಹ್ನದಿಂದ ಬುಧವಾರ ಬೆಳಿಗ್ಗೆ ವರೆಗೆ ಮತ್ತೊಂದು ಕೆಟ್ಟ ಹವಾಮಾನವು ಪಶ್ಚಿಮ ಪ್ರದೇಶಗಳಿಂದ ಪ್ರಾರಂಭವಾಗಬಹುದು ಮತ್ತು ದೇಶದ ಹಲವು ಪ್ರದೇಶಗಳಿಗೆ ಹರಡಬಹುದು ಎಂದು ಯುಎಇಯ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು