ನವದೆಹಲಿ: ಹಿಮಾಚಲ ಪ್ರದೇಶದ ಪ್ರವಾಸಿಗರ ಹಾಟ್ ಸ್ಪಾಟ್ ಶಿಮ್ಲಾ ಶ್ರೀ ಕೃಷ್ಣ ನಗರದಲ್ಲಿ ನಾಲ್ಕು ಮನೆಗಳು ಕುಸಿತಗೊಂಡಿದ್ದು, ಕನಿಷ್ಠ ಇಬ್ಬರು ಮಣ್ಣಿನಡಿ ಹೂತುಹೋಗಿದ್ದಾರೆ.
ಬುಧವಾರ ಮುಂಜಾನೆ ಕೃಷ್ಣ ನಗರ ಪ್ರದೇಶದಲ್ಲಿ ಭೂಕುಸಿತದಿಂದ ಎಂಟು ಮನೆಗಳು ಕೊಚ್ಚಿಹೋಗಿವೆ. ಭೂಕುಸಿತದಿಂದ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಮತ್ತು ಶಿಮ್ಲಾ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಮೇಘಸ್ಫೋಟದಿಂದ ಭಾರಿ ಮಳೆಯಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ತೊಡಕು ಉಂಟಾಗಿದೆ. ಮನೆಗಳು ಕುಸಿಯುತ್ತಿರುವ ದೃಶ್ಯ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಯ ಹುಟ್ಟಿಸುವಂತಿದೆ.
हिमाचल प्रदेश में कुदरत का कहर..अल्लाह सबकी हिफाज़त करे!#HimachalDisaster pic.twitter.com/VTPWze9giu
— Mohd Mustaqeem Mewati (@MustaqeemMewati) August 16, 2023