ನವದೆಹಲಿ: ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.
ಈ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದರು.
ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಸಮಿತಿ ತನಿಖೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಶಿಫಾರಸು ಮಾಡಲಿದೆ.ಸಿಆರ್ಪಿಎಫ್ನ ಡಿಜಿ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಸಂಸ್ಥೆಗಳ ಸದಸ್ಯರು ಮತ್ತು ತಜ್ಞರೊಂದಿಗೆ ವಿಚಾರಣಾ ಸಮಿತಿ ರಚಿಸಲಾಗಿದೆ’ ಎಂದು ಕೇಂದ್ರ ಗೃಹ ಸಚಿವಾಲಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಸಂಸತ್ ಭವನಕ್ಕೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹೊಗೆ ಬಾಂಬ್ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಗೃಹ ಸಚಿವಾಲಯ ಆದೇಶಿಸಿದೆ.