ನವದೆಹಲಿ: “ಭಯೋತ್ಪಾದನೆ ಇತರೆ ದೇಶಗಳ ಮೇಲೆ ಬೀರುತ್ತಿರುವ ಪರಿಣಾಮವನ್ನು ನಾವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗಬಹುದು” ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧ ಮೂರು ವಾರಗಳನ್ನು ಕಳೆದಿದೆ.
ಈ ಯುದ್ಧದಲ್ಲಿ ಒಂಬತ್ತೂವರೆ ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹೋರಾಟದಲ್ಲಿ ಬಹುತೇಕ ರಾಷ್ಟ್ರಗಳು ಇಸ್ರೇಲ್ ಬೆಂಬಲಕ್ಕೆ ನಿಂತಿವೆ. ಅದೇ ಸಮಯದಲ್ಲಿ, ಮಾನವೀಯ ಆಧಾರದ ಮೇಲೆ ಇಬ್ಬರ ನಡುವೆ ಕದನ ವಿರಾಮವನ್ನು ತಕ್ಷಣವೇ ಜಾರಿಗೆ ತರಲು ಪ್ರಸ್ತಾವನೆಯನ್ನು ನೀಡಲಾಗಿದೆ. ನಾವು ಭಯೋತ್ಪಾದನೆ ಮೇಲೆ ಕಠಿಣ ನಿಲುವನ್ನು ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ನಾವೇ ಬಲಿಪಶುಗಳಾಗುತ್ತೇವೆ ಎಂದಿದ್ದಾರೆ.
ಭಯೋತ್ಪಾದನೆ ನಮ್ಮ ಮೇಲೆ ಪರಿಣಾಮ ಬೀರಿದಾಗ ಮಾತ್ರ ಗಂಭೀರ ವಿಷಯ ಎಂದು ಹೇಳಿದಾಗ ಭಾರತದ ಮೇಲೆ ಬೇರೆ ದೇಶಗಳಿಗಿರುವ ವಿಶ್ವಾಸಾರ್ಹತೆ ಕಡಿಮೆಯಾಗಬಹುದು ಹಾಗಾಗಿ ನಾವು ಸ್ಥಿರ ನಿಲುವು ಕಾಯ್ದುಕೊಳ್ಳಬೇಕು ಎಂದಿದ್ದಾರೆ.
ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…
ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…
ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…