ದೆಹಲಿ: ಭಾರತ ಮತ್ತು ಕೆನಡಾದ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದಿದ್ದು, ಇನ್ನೂ ಶಮನಗೊಂಡಿಲ್ಲ ಈ ಮಧ್ಯೆ ಭಾರತ ಸರ್ಕಾರವು 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಕೆನಡಾಕ್ಕೆ ಹೇಳಿದೆ.
ಅಕ್ಟೋಬರ್ 10ರೊಳಗೆ ನಿಮ್ಮ 40 ರಾಜತಾಂತ್ರಿಕ ಅಧಿಕಾರಿಗಳು ಕೆನಡಾಕ್ಕೆ ವಾಪಸ್ಸು ಕರೆಸಿಕೊಳ್ಳುವಂತೆ ಭಾರತ ಸರ್ಕಾರ ಹೇಳಿದೆ. ಇನ್ನು ಇದು ಭಾರತ ಕೆನಡಾದ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಕೆನಡಾ ಹೇಳಿದೆ.
ಸಿಖ್ಖ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ಸರ್ಕಾರದ ಏಜೆಂಟ್ಗಳ ಕೈವಾಡ ಇದೆ ಎಂದು ಕೆನಡಾ ಆರೋಪಿಸಿತ್ತು. ಇದರ ಜತೆಗೆ ಈ ಘಟನೆಗೆ ಭಾರತವೇ ನೇರ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ ಆರೋಪಿಸಿರುವ ಕಾರಣ ಎರಡು ದೇಶಗಳ ನಡುವೆ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.