ನವದೆಹಲಿ: ಜಗತ್ತು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಯಾವುದೂ ಅಸಾಧ್ಯವಲ್ಲವೆಂದು ಭಾರತ ತನ್ನ ಸಾಧನೆಗಳ ಮೂಲಕ ತೋರಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ಇದು ಜನರ ಮತದಿಂದ ಸಾಧ್ಯವಾಗಿದೆ ಎಂದ ಮೋದಿ, ʼಎಂತಹ ಕಷ್ಟಕರ ಗುರಿಯಿದ್ದರೂ ಭಾರತ ಅದನ್ನು ಖಂಡಿತ ಮುಟ್ಟುತ್ತದೆ. ಈ ಸ್ಪೂರ್ತಿಯೊಂದಿಗೆ ನಾವು ಅಭಿವೃದ್ಧಿ ಹೊಂದಿದ ಭಾರತವಾಗುವತ್ತ ಸಾಗುತ್ತಿದ್ದೇವೆʼ ಎಂದರು.
ಕಾಂಗ್ರೆಸ್ ಅನ್ಯ ದೇಶಗಳಿಂದ ಸಹಾಯ ಕೇಳುತ್ತಿದ್ದ ಸಮಯವೊಂದಿತ್ತು ಎಂದ ಅವರು, ಕೋವಿಡ್ ಸಮಯದಲ್ಲಿ ಭಾರತ ಪ್ರಪಂಚಕ್ಕೇ ಔಷಧಿ ಹಾಗು ಲಸಿಕೆಗಳನ್ನು ಒದಗಿಸಿದ್ದನ್ನು ಸೇರಿದಂತೆ ಚಂದ್ರಯಾನ-೩ರ ಯಶಸ್ವಿ ಉಡಾವಣೆ, ದೇಶದ ಆರ್ಥಿಕ ಬೆಳವಣಿಗೆ, ಜಿ-೨೦ ಸಮ್ಮೇಳನಗಳ ಯಶಸ್ಸನ್ನು ಉಲ್ಲೇಖಿಸಿದರು.
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…
ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.