ನವದೆಹಲಿ: ಕಳೆದ ವರ್ಷ ನಡೆದ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ಭಾರತವು “ಅಸಂಬದ್ಧ ಮತ್ತು ಪ್ರೇರಿತ” ಎಂದು ಹೇಳಿದೆ. ಖಲಿಸ್ತಾನಿ ಭಯೋತ್ಪಾದಕರ ಹತ್ಯೆ ವಿಚಾರವಾಗಿ ಕೆನಡಾ ಭಾರತದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.
ಕಳೆದ ವರ್ಷ ಜೂನ್ನಲ್ಲಿ ನಡೆದ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯನ್ನು ಭಾರತ ಸರ್ಕಾರದ ಏಜೆಂಟರು ನಡೆಸಿದ್ದಾರೆ ಎಂದು ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಹೇಳಿದ್ದರು.
ಕೆನಡಾ ಪ್ರಧಾನಿ ಮಾಡಿರುವ ಆರೋಪಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ ಎಂದು ಭಾರತ ಸರ್ಕಾರ ಹೇಳಿದೆ. “ಇಂತಹ ಆಧಾರ ರಹಿತ ಆರೋಪಗಳು ಕೆನಡಾದಲ್ಲಿ ಆಶ್ರಯ ಪಡೆದಿರುವ ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಬೆದರಿಕೆ ಹಾಕುತ್ತಿರುವ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳಿಗೆ ಕುಮ್ಮಕ್ಕು ನೀಡುತ್ತದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ.