ನವದೆಹಲಿ: ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮೂಲದ ಕರ್ನಾಲ್ನ ಇಬ್ಬರು ಸಹೋದರರಾದ ಅಭಿಜಿತ್ (26) ಮತ್ತು ರಾಬಿನ್ ಗಾರ್ಟನ್ (27) ಎಂಬ ಇಬ್ಬರನ್ನು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನಲ್ಲಿ ಬಂಧಿಸಲಾಗಿದೆ.
ಹತ್ಯೆಗೀಡಾದ ಕರ್ನಾಲ್ ಮೂಲದ 22 ವರ್ಷದ ನವಜೀತ್ ಸಂಧು ಎಂದು ಗುರುತಿಸಲಾಗಿದ್ದು, ವಿದ್ಯಾರ್ಥಿ ಆಸ್ಟ್ರೇಲಿಯಾದಲ್ಲಿ ಎಂಟೆಕ್ ಪದವಿ ಓದುತ್ತಿದ್ದರು. ಇವರಜೊತೆಗಿದ್ದ 30 ವರ್ಷದ ಶರ್ವನ್ ಕುಮಾರ್ಗೂ ಗಂಭೀರ ಗಾಯಗಳಾಗಿದೆ.
ಕೊಲೆ ಮಾಡಿರುವ ಸಹೋದರರು ಕರ್ನಾಲ್ನ ಬಸ್ತಾರಾ ಗ್ರಾಮದ ನಿವಾಸಿಗಳಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇಬ್ಬರ ಮೇಲೇ ಮೇಲೆ ದಾಳಿ ಮಾಡಿದ ಸಹೋದರರಿಬ್ಬರು ಅಲ್ಲಿಂದ ಪರಾರಿಯಾಗಿದ್ದರು.ಕರ್ನಾಲ್ನ ಗಗ್ಸಿನಾ ಗ್ರಾಮದ ನವಜೀತ್ ಸಂಧು ಅವರ ಎದೆಗೆ ಮಾರಣಾಂತಿಕವಾಗಿ ಇರಿದಿದ್ದರು.
ಕರ್ನಾಲ್ನ ನಿವಾಸಿಯಾದ ಅವರ ಚಿಕ್ಕಪ್ಪ ಯಶವೀರ್ ಪ್ರಕಾರ, ಸಂಧು ಅವರು ಕೆಲವು ಬಾಡಿಗೆ ವಿಚಾರದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು.