News Karnataka Kannada
Monday, April 29 2024
ದೆಹಲಿ

ಅನ್ನದಾತರ ಪ್ರತಿಭಟನಾ ಸ್ಥಳದಲ್ಲಿ ಇಂಟರ್ನೆಟ್ ಬಂದ್ ಬಂದ್..!

ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನ್ನದಾತರ ಸಮರ ರೈತ ದಂಗಲ್ 4ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಹಾಗೂ ರೈತರ ನಡುವಿನ ರಣರಂಗ ಮತ್ತಷ್ಟು ತೀವ್ರಗೊಂಡಿದೆ. ರೈತರನ್ನು ಕಟ್ಟಿಹಾಕಲು ಭದ್ರತಾಪಡೆ ಸೇನಾನಿಗಳಂತೆ ಹೋರಾಡುತ್ತಿದ್ದಾರೆ.
Photo Credit : News Kannada

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನ್ನದಾತರ ಸಮರ ರೈತ ದಂಗಲ್ 4ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಹಾಗೂ ರೈತರ ನಡುವಿನ ರಣರಂಗ ಮತ್ತಷ್ಟು ತೀವ್ರಗೊಂಡಿದೆ. ರೈತರನ್ನು ಕಟ್ಟಿಹಾಕಲು ಭದ್ರತಾಪಡೆ ಸೇನಾನಿಗಳಂತೆ ಹೋರಾಡುತ್ತಿದ್ದಾರೆ.

ಸಾವಿರಾರು ರೈತರಿಂದ ದೆಹಲಿ ಚಲೋಗೆ ಯುದ್ಧಕ್ಕೆ ಹೊರಟವರಂತೆ ಅನ್ನದಾತರು ನುಗ್ಗುತ್ತಿದ್ದಾರೆ. ರೈತರನ್ನ ತಡೆಯಲು ಪೊಲೀಸರ ರಣವ್ಯೂಹ ರಚನೆ ಮಾಡಿದ್ದಾರೆ.

ರೈತರ ಪ್ರತಿಭಟನೆ ಕಾವೇರುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣದ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್ ಸೇರಿ ಏಳು ಜಿಲ್ಲೆಗಳಲ್ಲಿ ನಾಳೆವರೆಗೆ ಇಂಟರ್ನೆಟ್ ಹಾಗೂ ಎಸ್​ಎಂಎಸ್​ ಮೇಲಿನ ನಿಷೇಧವನ್ನು ವಿಸ್ತರಿಸಲಾಗಿದೆ.

ಇನ್ನು ರೈತ ಹೋರಾಟಕ್ಕೆ ಕೇಂದ್ರ ಸರ್ಕಾರ ಹಲವು ನಿರ್ಬಂಧ ವಿಧಿಸಿರೋದನ್ನ ಖಂಡಿಸಿ ಇಂದು ಗ್ರಾಮೀಣ ಭಾರತ ಬಂದ್​​ಗೆ ರೈತ ಸಂಘಗಳು ಕರೆ ನೀಡಿವೆ. ದೇಶವ್ಯಾಪಿ ಗ್ರಾಮಗ್ರಾಮಗಳಲ್ಲೂ ಬಂದ್ ಆಗಬೇಕು ಅಂತ ಕರೆ ನೀಡಿವೆ. ಬೆಳಗ್ಗೆಯಿಂದ ಸಂಜೆ 4ರವರೆಗೆ ಕರೆ ನೀಡಿವೆ. ದೇಶಾದ್ಯಂತ ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಇನ್ನು ಕರ್ನಾಟಕದಲ್ಲೂ ರಸ್ತೆ ತಡೆ ನಡೆಸಲು ರೈತ ಸಂಘಟನೆಗಳು ಕರೆ ನೀಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು