ಹೊಸದಿಲ್ಲಿ: ಐಸಿಸ್ನ ನೇಮಕಾತಿ ಸ್ಥಳಗಳ ಮೇಲೆ ಎನ್ಐಎ ಶನಿವಾರ ತಮಿಳುನಾಡು ಮತ್ತು ತೆಲಂಗಾಣದ 31 ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ಸಂಬಂಧ ಹಲವಾರು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ 60 ಲಕ್ಷರೂ.ಗಳನ್ನು ವಶಕ್ಕೆ ಪಡೆದಿದೆ. ಶೋಧದ ವೇಳೆ ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಹಾರ್ಡ್ ಡಿಸ್ಕ್ಗಳಲ್ಲಿನ ಡೇಟಾವನ್ನು ಎನ್ಐಎ ಪರಿಶೀಲಿಸುತ್ತಿದೆ. ದಾಳಿ ವೇಳೆ ಅರೇಬಿಕ್ ಮತ್ತು ಸ್ಥಳೀಯ ಭಾಷೆಗಳಲ್ಲಿ ಹಲವಾರು ಪ್ರಚೋದನಾ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏತನ್ಮಧ್ಯೆ, ತಂಡವು ಚೆನ್ನೈ, ಕೊಯಮತ್ತೂರು ಮತ್ತು ತೆಂಕಶಿಯಲ್ಲಿರುವ ಕೆಲವು ಶಂಕಿತರ ನಿವಾಸಗಳ ಮೇಲೆ ದಾಳಿ ನಡೆಸಿದೆ. ಅಲ್ಲದೆ ಐಸಿಸ್ ನೇಮಕಾತಿಯಲ್ಲಿ ತೊಡಗಿದ್ದ ಕೆಲ ಶಂಕಿತರನ್ನು ತನ್ನ ಕಚೇರಿಗೆ ವಿಚಾರಣೆಗೆ ಬರುವಂತೆ ಎನ್ಐಎ ಸೂಚಿಸಿದೆ.
ಎನ್ಐಎ ತಂಡವು ಕೊಯಮತ್ತೂರಿನ 22 ಸ್ಥಳಗಳು, ಚೆನ್ನೈನ ಮೂರು ಮತ್ತು ತಮಿಳುನಾಡಿನ ತೆಂಕಶಿ ಜಿಲ್ಲೆಯ ಕಡಯನಲ್ಲೂರಿನ ಒಂದು ಸ್ಥಳಗಳಲ್ಲಿ ಮುಂಜಾನೆ ದಾಳಿ ನಡೆಸಿತು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.
ಹೈದರಾಬಾದ್ ಮತ್ತು ತೆಲಂಗಾಣದ ಸೈಬರಾಬಾದ್ನ ಐದು ಸ್ಥಳಗಳಲ್ಲಿಯೂ ಶೋಧ ನಡೆದಿದೆ. ಧಾರ್ಮಿಕ ಕೇಂದ್ರಗಳಲ್ಲಿ ಅರೇಬಿಕ್ ಭಾಷಾ ತರಗತಿ ನಡೆಸುವ ಸೋಗಿನಲ್ಲಿ ಭಯೋತ್ಪದನಾ ತರಬೇತಿ, ನೋಂದಣಿ ಪ್ರಕ್ರಿಯೆ ನಡೆಯುತ್ತಿತ್ತು. ಅಲ್ಲದೆ ಸಾಮಾಜಿಕ ಮಾಧ್ಯಮಗಳಾದ ವಾಟ್ಸಾಪ್ ಮತ್ತು ಟೆಲಿಗ್ರಾಮ್ನಂತಹಅಪ್ಲಿಕೇಶನ್ಗಳ ಮೂಲಕ ಆನ್ಲೈನ್ ಭಯೋತ್ಪದನಾ ಪ್ರಚಾರ ನಡೆಯುತ್ತಿತ್ತು. ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ತತ್ವ “ವಿರೋಧಿ” ‘ಖಿಲಾಫತ್’ ಸಿದ್ಧಾಂತದ ಪ್ರಚಾರದಲ್ಲಿ ಐಸಿಸ್-ಪ್ರೇರಿತ ಏಜೆಂಟ್ ಪ್ರಚೋದಕರು ತೊಡಗಿಸಿಕೊಂಡಿದ್ದರು ಎಂದು NIA ಹೇಳಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.