ನವದೆಹಲಿ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರನ್ನು ಇಂದು ಬೆಳಗ್ಗೆ ಅವರ ಮನೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಇಲ್ಲಿನ ರಾಣಿಗಂಜ್ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದ ಕೂಡಲೇ ಅಪರಾಧದ ತನಿಖೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
35 ವರ್ಷದ ಮೃತ ಪತ್ರಕರ್ತ ವಿಮಲ್ ಕುಮಾರ್ ಯಾದವ್ ದೈನಿಕ್ ಜಾಗರಣ್ ಪತ್ರಿಕೆಯಲ್ಲಿ ಸ್ಥಳೀಯ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂದೂಕುಧಾರಿಗಳು ಬೆಳಿಗ್ಗೆ 5:30 ರ ಸುಮಾರಿಗೆ ಅವರ ಬಾಗಿಲು ಬಡಿದು ಅವರ ಹೆಸರನ್ನು ಕರೆದರು ಮತ್ತು ಅವರು ಬಾಗಿಲು ತೆರೆದಾಗ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಹಳೆ ದ್ವೇಷವೇ ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.