News Karnataka Kannada
Friday, May 17 2024
ದೆಹಲಿ

ನಾನು ಮೊದಲು ನಿಮಗೇ ತಿಳಿಸುತ್ತೇನೆ; ಪಕ್ಷ ಬಿಡುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಕಮಲ್‌ನಾಥ್‌ ಉತ್ತರ

ಕಾಂಗ್ರೆಸ್ ನಾಯಕ ಕಮಲ್ ನಾಥ್ ಬಿಜೆಪಿ ಸೇರುವ ಬಗ್ಗೆ ವದಂತಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಈ ಕುರಿತು ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ.
Photo Credit : News Kannada

ನವದೆಹಲಿ: ಕಾಂಗ್ರೆಸ್ ನಾಯಕ ಕಮಲ್ ನಾಥ್ ಬಿಜೆಪಿ ಸೇರುವ ಬಗ್ಗೆ ವದಂತಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಈ ಕುರಿತು ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ.

ಶನಿವಾರ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಮಲ್‌ ನಾಥ್‌, ಪಕ್ಷ ತೊರೆಯುವ ಪ್ರಶ್ನೆಗೆ ಉತ್ತರಿಸದೆ, ಅದರ ಕುರಿತು ನಾನು ಮೊದಲು ನಿಮಗೇ(ಮಾಧ್ಯಮದವರಿಗೆ) ಹೇಳುತ್ತೇನೆ ಎಂದರು.

ಕಮಲ್‌ನಾಥ್‌ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್‌ ಖಾತೆಯ ಬಯೋದಿಂದ ಕಾಂಗ್ರೆಸ್ ಎಂದು ಬರೆದಿದ್ದುದನ್ನು ತೆಗೆದುಹಾಕಿದ್ದು ವದಂತಿಗಳಿಗೆ ಬಲ ತುಂಬಿದೆ. ಮಧ್ಯಪ್ರದೇಶದ ಚಿಂದ್ವಾರದ ಸಂಸದರಾಗಿರುವ ಅವರು ಸಂಸತ್ತಿನ ಕೆಳಮನೆಯಲ್ಲಿ ಒಂಭತ್ತು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದರು.

ಕಮಲ್ ನಾಥ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಬಂಡಾಯದ ಮೂಲಕ ಅವರ ಸರ್ಕಾರವನ್ನು ಕೆಡವಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು