ನವದೆಹಲಿ: ಆಯುಷ್ಮಾನ್ ಭವ ಆಂದೋಲನದ ಅಡಿಯಲ್ಲಿ ದೇಶವ್ಯಾಪ್ತಿ 70,000 ಜನರು ಅಂಗಾಂಗ ದಾನದ ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪೈಕಿ ಕರ್ನಾಟಕ ದೇಶದಲ್ಲಿ 3ನೇ ಸ್ಥಾನದಲ್ಲಿದೆ.
ಈ ಕುರಿತಂತೆ ಮಗಳವಾರ(ಸೆ.03) ಕೇಂದ್ರ ಆರೋಗ್ಯ ಖಾತೆ ಸಚಿವ ಮನ್ ಸುಖ್ ಮಾಂಡವಿಯ ಮಾಹಿತಿ ಬಿಡುಗಡೆ ಮಾಡಿದ್ದು, ಸೆ.13ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಾಲನೆ ಪಡೆದಿದ್ದ ಆಂದೋಲನಕ್ಕೆ, ದೇಶವ್ಯಾಪಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು. 70,000 ಜನರು ಅಂಗಾಂಗ ದಾನ ಮಾಡುವ ಪ್ರತಿಜ್ಞೆ ಕೈಗೊಂಡಿದ್ದಾರೆ.
ವಿಶೇಷವೆಂದರೇ ಪುರಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು. ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅತಿ ಹೆಚ್ಚು ಜನರು ಅಂಗಾಂಗ ದಾನದ ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿದರು.