ದೆಹಲಿ : ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬಂಧಿಸಿದೆ.
ಎನ್ಐಎ ರಾಜಸ್ಥಾನ ಮತ್ತು ಹರ್ಯಾಣದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.
ಅಶೋಕ್ ಕುಮಾರ್ ಬಂಧಿತ ಆರೋಪಿ. ಈತ ಗ್ಯಾಂಗ್ಸ್ಟರ್ ರೋಹಿತ್ ಗೋಡಾರಾ ಜತೆ ನಿಕಟ ಸಂಪರ್ಕ ಹೊಂದಿದ್ದ. ಗೊಗಮೆಡಿ ಹತ್ಯೆಯ ಹೊಣೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ವಹಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಕುಮಾರ್ ಬಂಧನದೊಂದಿಗೆ, ಕೊಲೆಯಲ್ಲಿ ಬಂಧಿತರ ಒಟ್ಟು ಸಂಖ್ಯೆ 9 ಆಗಿದೆ. 2023 ರ ಡಿಸೆಂಬರ್ 5 ರಂದು ಜೈಪುರದ ಕರ್ಣಿ ಸೇನಾ ಮುಖ್ಯಸ್ಥರ ಶ್ಯಾಮ್ ನಗರ ನಿವಾಸದಲ್ಲಿ ನಡೆದ ಶೂಟೌಟ್ನಲ್ಲಿ ಗೊಗಮೆಡಿ ಮತ್ತು ಮತ್ತೊಬ್ಬ ವ್ಯಕ್ತಿ ನವೀನ್ ಶೇಖಾವತ್ ಹತ್ಯೆಯಾಗಿತ್ತು.