ನವದೆಹಲಿ: ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ರಾಷ್ಟ್ರೀಯ ಹಿತಾಸಕ್ತಿಗಿಂತ ಕೇಜ್ರಿವಾಲ್ ಅವರಿಗೆ ಅವರ ವೈಯಕ್ತಿಕ ಹಿತಾಸಕ್ತಿ ಹೆಚ್ಚು ಮುಖ್ಯವಾಗಿದೆ, ಸರ್ಕಾರದ ಸಂಪೂರ್ಣ ಹಿತಾಸಕ್ತಿ ಅಧಿಕಾರದಲ್ಲಿದೆ ಎಂದು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಮತ್ತು ಸಮವಸ್ತ್ರಗಳ ಲಭ್ಯತೆಯಿಲ್ಲದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಈ ಅಭಿಪ್ರಾಯಗಳನ್ನು ನೀಡಿದೆ. ದೆಹಲಿ ನಗರಾಭಿವೃದ್ಧಿ ಸಚಿವ ಸೌರಭ್ ಭಾರದ್ವಾಜ್ ವಿದ್ಯಾರ್ಥಿಗಳ ಕಷ್ಟ ನೋಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದುಕೊಂಡು ಆಡಳಿತ ನಡೆಸುತ್ತಿರುವುದರಿಂದ ದೆಹಲಿಯ ವಿದ್ಯಾರ್ಥಿಗಳು ಮತ್ತು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಕೋರ್ಟ್ ಛೀಮಾರಿ ಹಾಕಿದೆ.