News Karnataka Kannada
Monday, April 29 2024
ದೆಹಲಿ

ಸರ್ಕಾರಿ ಶಾಲೆಯ ಗೋಡೆ ಮೇಲೆ ಖಲಿಸ್ತಾನ್ ಪರ ಬರಹ ಪತ್ತೆ

ಉತ್ತಮ್​ನಗರದಲ್ಲಿರುವ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಪ್ರತ್ಯೇಕತಾವಾದಿ ಖಲಿಸ್ತಾನ್ ಆಂದೋಲನವನ್ನು ಬೆಂಬಲಿಸುವ ಘೋಷಣೆಗಳನ್ನು ಬರೆಯಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Photo Credit : News Kannada

ದೆಹಲಿ: ಉತ್ತಮ್​ನಗರದಲ್ಲಿರುವ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಪ್ರತ್ಯೇಕತಾವಾದಿ ಖಲಿಸ್ತಾನ್ ಆಂದೋಲನವನ್ನು ಬೆಂಬಲಿಸುವ ಘೋಷಣೆಗಳನ್ನು ಬರೆಯಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಎಸ್​ಜೆಎಫ್​, ಖಲಿಸ್ತಾನ ಒಳಗೊಂಡಿರುವ ಬರಹವು ಖಲಿಸ್ತಾನಿ ಉಗ್ರ ಮತ್ತು ನಿಷೇಧಿತ ಸಂಘಟನೆಯಾಗಿರುವ ಸಿಖ್ಸ್ ಫಾರ್ ಜಸ್ಟೀಸ್ ನ ನಾಯಕ ಗುರುಪತ್ವಂತ್​ ಸಿಂಗ್ ಪನ್ನುಗೆ ಸಂಬಂಧಿಸಿದೆ.

ಪನ್ನು ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಅಷ್ಟೇ ಅಲ್ಲದೆ,ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು ಅತ್ಯಂತ ಅಪವಿತ್ರ, ಭಕ್ತಿಹೀನ, ಅನ್ಯಾಯದ ಸಮಾರಂಭವಾಗಿದೆ ಎಂದು ಹೇಳಿದ್ದ.

ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದಲ್ಲಿ ಪೌರತ್ವವನ್ನು ಹೊಂದಿರುವ ಪನ್ನು ನನ್ನು ಭಾರತವು ಆಂತರಿಕ ಭಯೋತ್ಪಾದಕ ಎಂದು ಘೋಷಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು