ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ (ಕೆಐಯುಜಿ) 2022 ಉತ್ತರ ಪ್ರದೇಶ (ಯುಪಿ) ಸ್ಪರ್ಧೆಯ ನಾಲ್ಕನೇ ದಿನದಂದು ತಮಿಳುನಾಡಿನ ಎಸ್ಆರ್ಎಂ ವಿಶ್ವವಿದ್ಯಾಲಯದ ವಿಕ್ಕಾಸ್ ಪ್ರಭಾಕರ್ ಈಜು ವಿಭಾಗದಲ್ಲಿ ಅತಿವೇಗದ ಪುರುಷ ಈಜುಗಾರರರಾಗಿ ಹೊರಹೊಮ್ಮಿದ್ದು, ಕರ್ನಾಟಕದ ಜೈನ್ ವಿಶ್ವವಿದ್ಯಾಲಯದ ಶಿವ ಶ್ರೀಧರ್ ಡಬಲ್ ಚಿನ್ನದ ಪದಕ ವಿಜೇತರಾದರು.
ಅಸ್ಸಾಂನ ಕಾಟನ್ ವಿಶ್ವವಿದ್ಯಾನಿಲಯದ ಹೃದಯ ಹಜಾರಿಕಾ ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ.
ಗ್ರೇಟರ್ ನೋಯ್ಡಾದ ಶಹೀದ್ ವಿಜಯ್ ಸಿಂಗ್ ಪಥಿಕ್ (ಎಸ್ವಿಎಸ್ಪಿ) ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುರುಷರ 50 ಮೀಟರ್ ಫ್ರೀಸ್ಟೈಲ್ ಡ್ಯಾಶ್ನಲ್ಲಿ ವಿಕ್ಕಾಸ್ 23.47 ರ ಟೈಮಿಂಗ್ನೊಂದಿಗೆ ಗೆದ್ದರು. ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದ ವೀರ್ ಖಟ್ಕರ್ ಮತ್ತು ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಶೈಲೇಶ್ ಶ್ವೇಜಲ್, ಎಂಎಸ್ 24.02 ಸೆಕೆಂಡ್ಗಳೊಂದಿಗೆ ಎರಡನೇ ಸ್ಥಾನ ಪಡೆದರು.
ಇದಕ್ಕೂ ಮುನ್ನ ಕ್ರೈಸ್ಟ್ ಯೂನಿವರ್ಸಿಟಿಯ ಅನೀಶ್ ಗೌಡ ಪುರುಷರ 400 ಮೀಟರ್ ಫ್ರೀಸ್ಟೈಲ್ ನಲ್ಲಿ ಗೆಲುವಿನೊಂದಿಗೆ ಕ್ರೀಡಾಕೂಟದ ಮೊದಲ ಚಿನ್ನ ಪಡೆದರು. ನಂತರದ ದಿನದಾಟದಲ್ಲಿ ಕಂಚಿನ ಪದಕವನ್ನೂ ಗೆದ್ದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…