ದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕ್ರೇಜಿವಾಲ್ ಅವರಿಗೆ ಅ.31ರಂದು ಸಂಜೆ ಇಡಿ ಸಮನ್ಸ್ ನೀಡಿತ್ತು. ಆದರೆ ಇದಕ್ಕೆ ಯಾವುದೇ ಉತ್ತರ ನೀಡದ ಅರವಿಂದ್ ಕ್ರೇಜಿವಾಲ್ ಅವರಿಗೆ ಇಂದು ಬೆಳಿಗ್ಗೆ 11.00 ಗಂಟೆಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಇದೀಗ ಕ್ರೇಜಿವಾಲ್ ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ, ನಿಮ್ಮ ನೋಟಿಸ್ನ್ನು ವಾಪಸ್ಸು ಪಡೆದುಕೊಳ್ಳಿ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಇನ್ನು ಅರವಿಂದ್ ಕೇಜ್ರಿವಾಲ್ ಅವರು ಮಧ್ಯಪ್ರದೇಶ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಪರವಾಗಿ ಪ್ರಚಾರಕ್ಕಾಗಿ ಹೋಗುತ್ತಿರುವಾಗ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ಇಡಿಯ ಈ ನೋಟಿಸ್ ರಾಜಕೀಯವಾಗಿದ್ದು, ಇದು ಅಕ್ರಮ ಎಂದು ಹೇಳಿದ್ದಾರೆ. ಇಡಿ ಬಿಜೆಪಿ ಆದೇಶದ ಮೇರೆಗೆ ಈ ಕೆಲಸವನ್ನು ಮಾಡುತ್ತಿದೆ. ಇನ್ನು ಇದನ್ನು ನಾನು ಒಪ್ಪುವುದಿಲ್ಲ, ತಕ್ಷಣ ತನ್ನ ಮೇಲೆ ಜಾರಿ ಮಾಡಿದ ನೋಟಿಸ್ ವಾಪಸ್ಸು ಪಡೆಯುಂತೆ ಇಡಿಗೆ ಪತ್ರದ ಮೂಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇನ್ನು ರಾಜಕೀಯ ವಿಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಎಎಪಿ ಪಕ್ಷ ಹೇಳಿದೆ.