ನವದೆಹಲಿ: ಕಾಂಗ್ರೆಸ್ ನವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಬಳಿಕ ಏನೇನೋ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂ’ ಸೂಚಿಸಿದ ಸ್ಥಳದಲ್ಲಿ ರಾಮಮಂದಿರ ಕಟ್ಟಿಲ್ಲವೆಂಬ ಸಂತೋಷ್ ಲಾಡ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 140 ಕೋಟಿ ಜನರನ್ನು ಒಗ್ಗೂಡಿಸುವ ಮಂದಿರ ಅದು. ಇದೊಂದು ರಾಷ್ಟ್ರೀಯ ಮಂದಿರ ಎಂದಿದ್ದಾರೆ.
ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತ ಮೂರು ವರ್ಗಕ್ಕೆ ನ್ಯಾಯ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರು ಕೂಡ ಬಿಜೆಪಿಗೆ ಓಟು ಹಾಕುತ್ತಾರೆ ಎಂದರು.