ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಮತ್ತೆ ಟಿಕೆಟ್ ಲಾಬಿ ಶುರುವಾಗಿದೆ ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳಿದ್ದ ಕೆಎಸ್ ಈಶ್ವರಪ್ಪ ಇದೀಗ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ನನ್ನು ಕಣಕ್ಕಿಳಿಸಲು ಹಾವೇರಿ ಟಿಕೆಟ್ಗೆ ಲಾಬಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಬಗ್ಗೆ ಸಮಲೋಚನೆ ಮಾಡಿದ್ದಾರೆ.
ಈ ವೇಳೆ ಪಕ್ಷದಲ್ಲಿನ ಕೆಲವೊಂದು ಸಮಸ್ಯೆ, ಗೊಂದಲಗಳ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.