ನವದೆಹಲಿ: ನವದೆಹಲಿಯಲ್ಲಿಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚಿಸಲಾಯಿತು. ಜೆಡಿಎಸ್ – ಬಿಜೆಪಿ ಮೈತ್ರಿ ಕುರಿತು ಚರ್ಚಿಸಲಾಯಿತು. ಕರ್ನಾಟಕದ ಒಳಿತಿಗಾಗಿ ಕೇಂದ್ರ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂಬುದಾಗಿ ರಾಜನಾಥ್ ಸಿಂಗ್ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಭಾರತ ಸರಕಾರದ ಮಾನ್ಯ ರಕ್ಷಣಾ ಸಚಿವರು ಹಾಗೂ @BJP4India ಪಕ್ಷದ ಹಿರಿಯ ನಾಯಕರಾದ ಶ್ರೀ @rajnathsingh ಅವರನ್ನು ಇಂದು ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.
ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರಕಾರದ ಸಹಕಾರ ಸದಾ ಇರುತ್ತದೆ ಎಂದು ಈ ಸಂದರ್ಭದಲ್ಲಿ ಶ್ರೀ ಸಿಂಗ್ ಅವರು ಭರವಸೆ ನೀಡಿದರು.… pic.twitter.com/1hruOqkIR0
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2023