ನವದೆಹಲಿ: ಇಂದು ಎರಡನೆ ಮತ್ತು ಕೊನೆಯ ದಿನದ G20 ಶೃಂಗಸಭೆ ನಡೆಯಲಿಕ್ಕಿದೆ. ರಾಜ್ಘಾಟ್ಗೆ ವಿಶ್ವ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಆಗಮಿಸಲಿದ್ದಾರೆ.
ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್ಘಾಟ್ಗೆ ಹೋಗಿದ್ದಾರೆ. ಸ್ಪೇನ್ನ ವೈಸ್ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.
ಜಿ20 ಶೃಂಗಸಭೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನಡುವೆ ಭಾನುವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ.