News Karnataka Kannada
Thursday, May 02 2024
ದೆಹಲಿ

ಇಂದು ಕೊನೆಯ ಜಿ20 ಶೃಂಗಸಭೆ: ರಾಜ್​ಘಾಟ್ ತೆರಳಿದ ನಾಯಕರು

Last G20 Summit today: Leaders leave for Rajghat
Photo Credit : News Kannada

ನವದೆಹಲಿ: ಇಂದು ಎರಡನೆ ಮತ್ತು ಕೊನೆಯ ದಿನದ G20 ಶೃಂಗಸಭೆ ನಡೆಯಲಿಕ್ಕಿದೆ. ರಾಜ್‌ಘಾಟ್​ಗೆ ವಿಶ್ವ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಆಗಮಿಸಲಿದ್ದಾರೆ.

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನಡುವೆ ಭಾನುವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು