ನವದೆಹಲಿ: ದೇಶದಲ್ಲಿ ರಕ್ಷಾ ಬಂಧನ ಸಂಭ್ರಮಾಚರಣೆ ನಡೆಯುತ್ತಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ಯವರಿಗೆ ಪಾಕಿಸ್ತಾನಿ ಮೂಲದ ಸಹೋದರಿಯೊಬ್ಬರು ರಾಖಿ ತಯಾರಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಸಹೋದರಿ ಖಮರ್ ಮೊಹ್ಸಿನ್ ಶೇಖ್ ಅಣ್ಣನಿಗಾಗಿ ವಿಶೇಷವಾದ ರಾಖಿ ತಯಾರಿಸಿದ್ದಾರೆ.
ಗುಜರಾತ್ ನ ಅಲಹಾಬಾದ್ ನಲ್ಲಿರೋ ಖಮರ್ ಮೊಹ್ಸಿನ್ ಶೇಖ್ ಈ ಬಾರಿ ತಾವೇ ಸ್ವತಃ ತಯಾರಿಸಿದ ರಾಖಿ ಕಟ್ಟುತ್ತಿದ್ದಾರೆ.
ಖಮರ್ ಮೊಹ್ಸಿನ್ ಶೇಖ್ ಕಳೆದ 30 ವರ್ಷಗಳಿಂದ ಮೋದಿಗೆ ರಾಖಿ ಕಟ್ಟುತ್ತಾ ಬಂದಿದ್ದಾರೆ. ಮೊದಲ ಬಾರಿಗೆ ಮೋದಿ ಸಂಘದಲ್ಲಿ ಕಾರ್ಯನಿರ್ವಹಿಸೊ ಸಂದರ್ಭದಲ್ಲಿ ರಾಖಿ ಕಟ್ಟಲಾಗಿತ್ತು. ಆಗಿನಿಂದ ಇಲ್ಲಿಯವರೆಗೆ ಪ್ರತಿ ವರ್ಷ ರಾಖಿ ಕಟ್ಟುತ್ತಾ ಬಂದಿದ್ದಾರೆ.
ಈ ಬಾರಿ ವಿಶೇಷವಾದ ರಾಖಿಯನ್ನು ಖಮರ್ ಮೊಹ್ಸಿನ್ ಶೇಖ್ ತಯಾರಿಸಿದ್ದಾರೆ. ಮೋದಿಗೆ ಅವರಿಗೆ ದೃಷ್ಟಿಯಾಗದಿರಲಿ ಎಂದು ವಸ್ತುಬಳಕೆ ಮಾಡಿ ರಾಖಿ ತಯಾರಿಸಿದ್ದಾರೆ. ಜೊತೆಗೆ ಕೆಂಪು ಬಣ್ಣದ ವಸ್ತು ಬಳಕೆ ಮಾಡಿದ್ದಾರೆ.
ಕೆಂಪು ಬಣ್ಣ ಶಕ್ತಿಯ ಸಂಕೇತ ಮತ್ತು ಕೆಂಪು ಎಲ್ಲಾ ಶುಭಕಾರ್ಯಗಳಲ್ಲಿ ಬಳಕೆ ಮಾಡಲಾಗುತ್ತೆ ಹಾಗಾಗಿ ಕೆಂಪು ಬಣ್ಣ ಬಳಕೆ ಮಾಡಿದ್ದಾರಂತೆ. ರಾಖಿ ಕಟ್ಟುವ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಪುಸ್ತಕವನ್ನು ಉಡುಗೊರೆಯಾಗಿ ನೀಡುತ್ತೇನೆ ಎಂದು ಸಹೋದರಿ ಖಮರ್ ಮೊಹ್ಸಿನ್ ಶೇಖ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು
ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…