News Karnataka Kannada
Tuesday, April 30 2024
ದೆಹಲಿ

ಇದು ಸಾಮಾನ್ಯ ಎಲೆಕ್ಷನ್‌ ಅಲ್ಲ: ಎನ್‌ಡಿಎ ಅಭ್ಯರ್ಥಿಗಳಿಗೆ ಮೋದಿ ಪತ್ರ

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇದೆ ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನೇತೃತ್ವದ ಎಲ್ಲ ಎನ್‌ಡಿಎ ಅಭ್ಯರ್ಥಿಗಳಿಗೆ (NDA ವೈಯಕ್ತಿಕವಾಗಿ ಪತ್ರ ಬರೆದಿದ್ದಾರೆ. “ಇದು ಸಾಮಾನ್ಯ ಎಲೆಕ್ಷನ್‌ ಅಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ” ಎಂಬುದು ಸೇರಿ ಮೋದಿ ಅವರು ಹಲವು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.
Photo Credit : NewsKarnataka

ನವದೆಹಲಿ: ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇದೆ ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನೇತೃತ್ವದ ಎಲ್ಲ ಎನ್‌ಡಿಎ ಅಭ್ಯರ್ಥಿಗಳಿಗೆ (NDA ವೈಯಕ್ತಿಕವಾಗಿ ಪತ್ರ ಬರೆದಿದ್ದಾರೆ. “ಇದು ಸಾಮಾನ್ಯ ಎಲೆಕ್ಷನ್‌ ಅಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ” ಎಂಬುದು ಸೇರಿ ಮೋದಿ ಅವರು ಹಲವು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.

“ಈ ಪತ್ರದ ಮೂಲಕ ನಾನು ನಿಮ್ಮ ಕ್ಷೇತ್ರದ ಜನರಿಗೆ ಇದು ಸಾಮಾನ್ಯವಾದ ಚುನಾವಣೆ ಅಲ್ಲ ಎಂಬುದನ್ನು ಹೇಳಲು ಬಯಸುತ್ತೇನೆ. ದೇಶಾದ್ಯಂತ ಕುಟುಂಬಗಳಲ್ಲಿ ಇರುವ ಹಿರಿಯರು 5-6 ದಶಕಗಳವರೆಗೆ ಕಾಂಗ್ರೆಸ್‌ ಆಡಳಿತವನ್ನು ನೋಡಿದ್ದಾರೆ. ಆದರೆ, ಕಳೆದ 10 ವರ್ಷಗಳಲ್ಲಿ ಸಮಾಜದ ಎಲ್ಲ ವರ್ಗಗಳ ಜನರ ಜೀವನ ಶೈಲಿಯು ಸುಧಾರಿಸಿದೆ. ತುಂಬ ಸಮಸ್ಯೆಗಳು ನಿವಾರಣೆಯಾಗಿವೆ. ಆದರೆ, ದೇಶದಲ್ಲಿ ಇನ್ನೂ ಹತ್ತಾರು ಸುಧಾರಣೆಗಳು ಆಗಲಿವೆ ಎಂಬುದನ್ನು, ನಿಮ್ಮ ಜೀವನಮಟ್ಟವು ಇನ್ನಷ್ಟು ಎತ್ತರಕ್ಕೆ ಹೋಗುತ್ತದೆ ಎಂಬ ಭರವಸೆ ನೀಡಲು ಬಯಸುತ್ತೇನೆ” ಎಂದು ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು