ನವದೆಹಲಿ: ಲೋಕಸಭೆಯಿಂದ ಉಚ್ಚಾಟಿತರಾದ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಎಸ್ಟೇಟ್ ನಿರ್ದೇಶನಾಲಯ ನೋಟಿಸ್ ನೀಡಿದೆ.
ತೃಣಮೂಲ ಕಾಂಗ್ರೆಸ್ ನಾಯಕಿ ಅವರಿಗೆ ಸಂಸದೆಯಾಗಿ ನೀಡಲಾಗಿದ್ದ ಬಂಗಲೆಯನ್ನು ಕೂಡಲೇ ತೆರವು ಮಾಡುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.
ಸಂಸತ್ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ 2023 ರ ಡಿಸೆಂಬರ್ 8 ರಂದು ಉಚ್ಚಾಟನೆ ಮಾಡಲಾಗಿತ್ತು.