ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.
ಇಂದು ಜಾರಿ ನಿರ್ದೇಶನಾಲಯವು ಸಂಜಯ್ ಸಿಂಗ್ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು ಮತ್ತು ವಿಚಾರಣೆಗಾಗಿ 10 ದಿನಗಳ ರಿಮಾಂಡ್ ಕೋರಿತು. ಆದರೆ ನ್ಯಾಯಾಲಯವು ಐದು ದಿನಗಳ ಕಸ್ಟಡಿಗೆ ನೀಡಿದೆ. ಇದರರ್ಥ ಸಂಜಯ್ ಸಿಂಗ್ ಅಕ್ಟೋಬರ್ 10 ರವರೆಗೆ ಇಡಿ ರಿಮಾಂಡ್ನಲ್ಲಿ ಉಳಿಯಲಿದ್ದಾರೆ. ಮದ್ಯ ಹಗರಣದಲ್ಲಿ ಸಂಜಯ್ ಸಿಂಗ್ ಅವರಿಗೆ 2 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಇಡಿ ನ್ಯಾಯಾಲಯದಲ್ಲಿ ಹೇಳಿದೆ.