ನವದೆಹಲಿ: ಅಯೋಧ್ಯೆ ರಾಮ ಮಂದಿರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ವಿಗ್ರಹ ಕೆತ್ತನೆ ಮಾಡುತ್ತಿದ್ದ ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ವಿಗ್ರಹ ಕೆತ್ತನೆಯನ್ನು ಪೂರ್ತಿಗೊಳಿಸಿದ್ದಾರೆ.
ಬೆಂಗಳೂರಿನ ಜಿಎಲ್ ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಮತ್ತು ಅರುಣ್ ಸೇರಿ ಮೂವರು ಕೆತ್ತನೆ ಮಾಡಿರುವ ಪೈಕಿ ಒಂದು ರಾಮನ ವಿಗ್ರಹವನ್ನು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.
ಅರುಣ್ ಕೆತ್ತನೆ ಮಾಡಿರುವ ಶ್ರೀರಾಮನ ವಿಗ್ರಹವು 5 ವರ್ಷದ ಬಾಲ ರಾಮನ ವಿಗ್ರಹವಾಗಿದೆ. ಇದು 8 ಅಡಿ ಎತ್ತರ ಹಾಗೂ 3.5 ಅಡಿ ಅಗಲವಿದ್ದು, ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುವ ಶ್ರೀರಾಮನ ವಿಗ್ರಹವಾಗಿದೆ.
ಇದಕ್ಕಾಗಿ ಅರುಣ್ 6 ತಿಂಗಳ ಸಮಯ ತೆಗೆದುಕೊಂಡಿದ್ದಾರೆ.