ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ಯನ್ನು (ಎನ್ಎಂಎಂಎಲ್) ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ.
ಈ ಕುರಿತು ರಾಷ್ಟ್ರಪತಿ ಭವನ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ ಎಂದು ವರದಿಯಾಗಿದೆ.
ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ (ಎನ್ಎಂಎಂಎಲ್) ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದ್ದು ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂಬುದಾಗಿ ಅಧಿಕೃತವಾಗಿ ಮರುನಾಮಕರಣಗೊಂಡಿದೆ.