ನವದೆಹಲಿ: ರಾಷ್ಟ್ರ ರಾಜಧಾನಿಯ ಮೋಹನ್ ಗಾರ್ಡನ್ ಪ್ರದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 11 ನೈಜೀರಿಯಾ ಪ್ರಜೆಗಳನ್ನು ದ್ವಾರಕಾ ಪೊಲೀಸರು ಬಂಧಿಸಿದ್ದಾರೆ.
ದ್ವಾರಕಾ ಪೊಲೀಸ್ ಎಟಿಎಸ್ ಮತ್ತು ಮಾದಕವಸ್ತು ವಿರೋಧಿ ಸೆಲ್ ತಂಡಗಳು ಜಂಟಿಯಾಗಿ ಈ ಬಂಧನಗಳನ್ನು ನಡೆಸಿದ್ದಾರೆ.
ಎಟಿಎಸ್ ತಂಡವು ಭಾರತದಲ್ಲಿ ಅಕ್ರಮವಾಗಿ ವಾಸಿಸುವ ಜನರನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದೆ. ನೈಜೀರಿಯನ್ನರ ಬಗ್ಗೆ ತಿಳಿದಾಗ, ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಮತ್ತು ತಿರುಗಾಡುತ್ತಿದ್ದ ನೈಜೀರಿಯನ್ನರ ನ್ನು ಬಂಧಿಸಲು ತಂಡವು ಕಾರ್ಯಪ್ರವೃತ್ತವಾಯಿತು. ವೀಸಾ ಅವಧಿ ಮುಗಿದ ನಂತರವೂ ವಾಸಿಸುತ್ತಿದ್ದ 11 ನೈಜೀರಿಯಾ ಪ್ರಜೆಗಳನ್ನು ಬಂಧಿಸುವಲ್ಲಿ ತಂಡಗಳು ಯಶಸ್ವಿಯಾದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರು ಮಾನ್ಯ ವೀಸಾವಿಲ್ಲದೆ ಭಾರತದಲ್ಲಿ ವಾಸಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ ಮುಂದೆ ಹಾಜರುಪಡಿಸಲಾಯಿತು, ಅವರು ಅವರನ್ನು ಗಡೀಪಾರು ಮಾಡಲು ಆದೇಶಿಸಿದ್ದಾರೆ. ಎಂದು ದ್ವಾರಕಾ ಡಿಸಿಪಿ ಎಂ.ಹರ್ಷ ವರ್ಧನ್ ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…