ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರವು ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನದಲ್ಲಿ ಪ್ರತಿಷ್ಠಾಪಿಸಲಾದ ಜನರ ಹಕ್ಕುಗಳ ಮೇಲೆ ನೇರ ಹೊಡೆತವಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಹೇಳಿದ್ದಾರೆ.
ಬಿಜೆಪಿ ಆಡಳಿತದ ತಪ್ಪು ಮತ್ತು ಜನವಿರೋಧಿ ನೀತಿಗಳ ವಿರುದ್ಧ ಯಾರೇ ಮಾತನಾಡಿದರೂ ಅವರಿಂದ ಬಂಧನ ಮತ್ತು ದಾಳಿಗಳ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ವಾಕ್ ಸ್ವಾತಂತ್ರ್ಯ, ಪ್ರತಿಭಟನೆಗಳು ಮತ್ತು ಸಂಘಟನೆಗಳನ್ನು ಭಾರತೀಯ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ಆಡಳಿತವು ನಿರ್ದಯವಾಗಿ ಹತ್ತಿಕ್ಕಿದೆ.
ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಮತ್ತು ಭಿನ್ನಮತದ ಧ್ವನಿಯನ್ನು ವ್ಯಕ್ತಪಡಿಸದಂತೆ ಜನರನ್ನು ಹೆದರಿಸಲು ಆಡಳಿತವು ತನಿಖಾ ಸಂಸ್ಥೆಗಳು ಮತ್ತು ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಎಂ.ಕೆ. ಫೈಜಿ ಹೇಳಿದರು.
ಸರ್ವಾಧಿಕಾರಿ ಆಡಳಿತವನ್ನು ವಿರೋಧಿಸಲು ಮತ್ತು ಭಾರತೀಯ ಸಂವಿಧಾನದ ಪ್ರಜಾಪ್ರಭುತ್ವ ಮತ್ತು ಮೌಲ್ಯಗಳನ್ನು ಉಳಿಸಲು ಎಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಜನರು ತಮ್ಮನ್ನು ತಾವು ಬದ್ಧರಾಗಿರಬೇಕಾದ ಸಮಯ ಇದು ಎಂದು ಫೈಜಿ ಹೇಳಿದರು.